ರಾಮು ಕವಿತೆಗಳು : ಇನ್ನಷ್ಟು ಓದು

ಪ್ರಕೃತಿ ಪ್ರಕಾಶನದ ಮೊದಲ ಪುಸ್ತಕ ಅನಾಮಧೇಯ ಕವಿಯೊಬ್ಬರ ಕವನ ಸಂಕಲನ ‘ರಾಮು ಕವಿತೆಗಳು‘ ಋತುಮಾನ ಅಂತರ್ಜಾಲ ತಾಣದಲ್ಲಿ ಸೆಪ್ಟೆಂಬರ್ ೧೪ ರಂದು ಬಿಡುಗಡೆಯಾಯಿತು. ವಿಮರ್ಶಕರಾದ ಓ. ಎಲ್. ನಾಗಭೂಷಣಸ್ವಾಮಿ ಮತ್ತು ಎಚ್. ಎಸ್. ರಾಘವೇಂದ್ರ ರಾವ್ ಈ ಕವನ ಸಂಕಲನದ ಇನ್ನೊಂದಷ್ಟು ಪದ್ಯಗಳನ್ನು ಇಲ್ಲಿ ಓದಿದ್ದಾರೆ. ನೀವು ಪುಸ್ತಕವನ್ನು ಋತುಮಾನ ಅಂತರ್ಜಾಲ ಮಳಿಗೆಯ ಈ ಕೊಂಡಿಯಲ್ಲಿ ಖರೀದಿಸಬಹುದು.

http://store.ruthumana.com/product/ramu_kavitegalu/

ಕವಿತೆಯು ಭಾಷೆಯಲ್ಲಿಯೇ ಆಗಬೇಕು ಎಂಬುದನ್ನು ವ್ರತದಂತೆ ಪಾಲಿಸುವ ಇಲ್ಲಿನ ಕವಿತೆಗಳು ಕನ್ನಡ ಭಾಷೆ ಮತ್ತು ಕನ್ನಡ ಸಾಹಿತ್ಯಕ್ಕೆ ಹೊಸ ದನಿಯನ್ನು ಸೇರಿಸುತ್ತಿವೆ. ಮನುಷ್ಯನ ಅಸಾಹಯಕತೆ, ಸಂಭ್ರಮ, ವಿರಾಹ, ವಿಷಾದ, ನೋವು, ಪ್ರತಿಭಟನೆ ಇತ್ಯಾದಿ ಭಾವಗಳನ್ನು ಅತಿ ಸರಳ ಭಾಷೆಯಲ್ಲಿ ಉಸುರುವ ಈ ಕವಿತೆಗಳು ಭಾಷಾಲೋಕದ ಬೆರಗನ್ನು ತನ್ನೊಳಗೆ ಬಚ್ಚಿಟ್ಟುಕೊಂಡಿರುವ ಕಾರಣದಿಂದಲೇ ತನ್ನದೇ ವಿಶಿಷ್ಠ ಭಾಷೆ ಮತ್ತು ನುಡಿಗಟ್ಟನ್ನು ಸೃಷ್ಟಿಸಿಕೊಂಡಿದೆ.


ಪ್ರತಿಕ್ರಿಯಿಸಿ